ಶತಮಾನೋತ್ಸವ ಸಂಭ್ರಮದಲ್ಲಿ ಬಸವೇಶ್ವರ ಸಹಕಾರ ಸಂಘದ ಶಕ್ತಿ ಪ್ರದರ್ಶನ.!

100 ವರ್ಷದ ಯಶೋಗಾಥೆಗೆ ಸಾಕ್ಷಿಯಾದ ಧರ್ಮಸಭೆ – ಸಹಕಾರ ಕ್ಷೇತ್ರಕ್ಕೆ ಮಾದರಿಯಾದ ಶಿವಮೊಗ್ಗದ ಐತಿಹಾಸಿಕ ಸಂಸ್ಥೆ ಶಿವಮೊಗ್ಗದ ಹೆಮ್ಮೆಯ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ “ಶ್ರೀ ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ (ನಿ.)” ತನ್ನ ಶತಮಾನೋತ್ಸವ ಸಂಭ್ರಮವನ್ನು ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಹಾಗೂ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಅವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. … Read more

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ವಿಜಯ್(ವಿಜಿ) ನಿಧನ.!?

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಶಿವಮೊಗ್ಗ: ಗಾಜನೂರಿನ ಸಕ್ರೆಬೈಲಿನ ಪ್ರಸಿದ್ಧ “ಪ್ರಕೃತಿ ಫಿಶ್ ಹೋಟೆಲ್” ಮಾಲೀಕ ವಿಜಯ್ ಕುಮಾರ್ (42) ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಸೋಮವಾರ ರಾತ್ರಿ ಶಿವಮೊಗ್ಗದಿಂದ ಸಕ್ರೆಬೈಲು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅರಕೆರೆ ಸಮೀಪ ಅಪಘಾತ ಸಂಭವಿಸಿತ್ತು. ಅಪಘಾತದ ಪರಿಣಾಮ ವಿಜಯ್ ಕುಮಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ … Read more

ವಿಜಯ್ ಸಿಎಂ ಪ್ರಮಾಣವಚನಕ್ಕೆ  ಹೆಂಡತಿ – ಮಕ್ಕಳ ಗೈರು, ನಟಿ ತ್ರಿಷಾ ಹಾಜರಿ! ಇದೀಗ ಶುರುವಾಯ್ತು  ಸಂಕಷ್ಟ!

ನಟ ‘ದಳಪತಿ’ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಈ ಸಮಾರಂಭಕ್ಕೆ ಅವರ ಕುಟುಂಬದ ಬದಲು ನಟಿ ತ್ರಿಷಾ ಕೃಷ್ಣನ್ ಹಾಜರಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ. ತಮಿಳು ಸಿನಿಮಾರಂಗದ ‘ದಳಪತಿ’ ವಿಜಯ್ ಈಗ ತಮಿಳುನಾಡಿನ ಮುಖ್ಯಮಂತ್ರಿ ಚೆನ್ನೈನ ನೆಹರೂ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಅವರು ರಾಜ್ಯದ 13ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ಸಾಕ್ಷಿಯಾದ್ರು. ಆದರೆ, … Read more

ಜರ್ಮನಿಯಲ್ಲಿ ಬಸವ ಜಯಂತಿ ಸಂಭ್ರಮ.!

ಡಾ. ಬಸವ ಮರುಳಸಿದ್ದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಮಹಾಸಮಾವೇಶ ಜರ್ಮನಿಯ ಎರ್ಲಾಂಗೆನ್ ನಗರದಲ್ಲಿ ಮೇ 16ರಂದು ಬಸವ ಸಮಿತಿ ಯುರೋಪ್ ವತಿಯಿಂದ ಎರಡನೇ ಬಸವ ಜಯಂತಿ ಸಮಾವೇಶ ಅದ್ಧೂರಿಯಾಗಿ ನಡೆಯಲಿದೆ. ಈ ಸಮಾವೇಶಕ್ಕೆ ಭಾರತದ ಜರ್ಮನಿ ರಾಯಭಾರಿಯಾಗಿರುವ  Ajit Vinayak Gupte ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಬಸವತತ್ವ ಪೀಠ, ಚಿಕ್ಕಮಗಳೂರು ಹಾಗೂ ಬಸವ ಕೇಂದ್ರ, ಶಿವಮೊಗ್ಗದ ಪೂಜ್ಯ Dr. Basava Marulasiddha Swamiji ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನ ನೀಡಲಿದ್ದಾರೆ. ಬಸವ ತತ್ವ, ಸಮಾನತೆ, … Read more

ಪುರ ಸಭೆ ಸದಸ್ಯ TO ಬಂಗಾಳ ಸಿಎಂ.!

ಪುರ ಸಭೆ ಸದಸ್ಯರಾಗಿದ್ದ ಸುವೇಂದು ಅಧಿಕಾರಿ ಈಂದು ಬಂಗಾಳ ಸಿಎಂ ಅಗಿ ಪ್ರಮಾಣ ವಚನ ಸ್ವೀಕಾರ. ಕಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲದ ಎಡಪಂಥೀಯ ಮತ್ತು ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ತೆರೆ ಬಿದ್ದಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸ್ವಾತಂತ್ರ್ಯಾನಂತರ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಹಿಡಿದಿರುವುದು ಇದೇ ಮೊದಲು. ಅದ್ದೂರಿ ಪ್ರಮಾಣ ವಚನ ಸಮಾರಂಭ ಕೋಲ್ಕತ್ತಾದ ರಾಜಭವನದಲ್ಲಿ ನಡೆದ ಅದ್ಧೂರಿ … Read more

‎ ‎ಕೋಟೆನಾಡಿನಲ್ಲಿ ಬಿ.ಎಸ್.ವೈ ಅಬ್ಬರ: ಸಹಸ್ರಾರು ಅಭಿಮಾನಿಗಳ ಮಧ್ಯೆ ಅದ್ಧೂರಿ ಪುರಪ್ರವೇಶ! ‎

ಚಿತ್ರದುರ್ಗ, ಮೇ 8: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ “ಬಿ.ಎಸ್.ವೈ ಅಭಿಮಾನೋತ್ಸವ” ಬೃಹತ್ ಕಾರ್ಯಕ್ರಮದ ಅಂಗವಾಗಿ, ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಜನಪ್ರಿಯ ರೈತ ನಾಯಕ B. S. Yediyurappa ಅವರ ಅದ್ಧೂರಿ ಪುರಪ್ರವೇಶ ಕಾರ್ಯಕ್ರಮ ನಗರದಲ್ಲಿ ಭವ್ಯವಾಗಿ ಜರುಗಿತು. ಕನಕವೃತ್ತದಿಂದ ಮದಕರಿ ವೃತ್ತದವರೆಗೆ ನಡೆದ ಭವ್ಯ ಮೆರವಣಿಗೆಯಲ್ಲಿ ಸಹಸ್ರಾರು ಅಭಿಮಾನಿಗಳು ಪಾಲ್ಗೊಂಡು, ತಮ್ಮ ನೆಚ್ಚಿನ ನಾಯಕನಿಗೆ ಹೂಮಳೆಗರೆದು ಜಯಘೋಷಗಳೊಂದಿಗೆ ಆತ್ಮೀಯ ಸ್ವಾಗತ ಕೋರಿದರು. ಐದು ದಶಕಗಳ ಕಾಲ ರಾಜ್ಯದ ಅಭಿವೃದ್ಧಿ ಹಾಗೂ ರೈತರ ಹಿತಕ್ಕಾಗಿ ಶ್ರಮಿಸಿದ … Read more

ಶಿವಮೊಗ್ಗದಲ್ಲಿ ಎಂ.ಆರ್.ಎನ್ ಸೌಹಾರ್ದದ ಭರ್ಜರಿ ಪ್ರವೇಶ: 71ನೇ ಶಾಖೆ ಶುಭಾರಂಭಕ್ಕೆ ಸಜ್ಜು.!?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಉತ್ತರ ಕರ್ನಾಟಕದ ಹೆಮ್ಮೆಯ ಎಂ.ಆರ್.ಎನ್ (MRN) ಸೌಹಾರ್ದ ಕ್ರೆಡಿಟ್ ಸಹಕಾರಿಯ 71ನೇ ಶಾಖೆ ಆರಂಭಗೊಳ್ಳುತ್ತಿರುವುದು ವಿಶೇಷ ಗಮನ ಸೆಳೆಯುತ್ತಿದೆ. ಮುರಗೇಶ್ ಆರ್. ನಿರಾಣಿ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ತನ್ನದೇ ಗುರುತನ್ನು ಮೂಡಿಸಿಕೊಂಡಿರುವ ಈ ಸಂಸ್ಥೆ, ಇದೀಗ ಶಿವಮೊಗ್ಗದಲ್ಲಿಯೂ ತನ್ನ ಸೇವೆಯನ್ನು ವಿಸ್ತರಿಸುತ್ತಿದೆ. ಇದೇ ಶುಕ್ರವಾರ, 08-05-2026ರಂದು ಬೆಳಿಗ್ಗೆ 10.30ಕ್ಕೆ ಜೈಲ್ ರಸ್ತೆಯ ಸುಬಯ್ಯ ಆಸ್ಪತ್ರೆ ಸಮೀಪದ ಹೊಸಮನೆ ಐದನೇ ತಿರುವು, ವಾರ್ಡ್ 20ರಲ್ಲಿ ಶಾಖೆಯು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಈ ಶಾಖೆಯ ಆರಂಭದಿಂದ … Read more

ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ.!

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಘಟನೆಯ ವಿವರ: ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರು ಈ ಅವಘಡಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಅವಶೇಷಗಳಡಿ … Read more

ಬಡ ಮಕ್ಕಳ ದಾಖಲಾತಿಗೆ ಖಾಸಗಿ ಶಾಲೆಗಳು ಅಡ್ಡಿಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್ ಖಡಕ್ ಆದೇಶ.!

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಮಕ್ಕಳಿಗೆ (Underprivileged Students) ಶಿಕ್ಷಣ ನೀಡುವುದು ಕೇವಲ ಕಾನೂನಿನ ನಿಯಮವಲ್ಲ, ಅದೊಂದು ‘ರಾಷ್ಟ್ರೀಯ ಮಿಷನ್’ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಸರ್ಕಾರದ ನಿಯಮದಂತೆ ಸೀಟು ಹಂಚಿಕೆಯಾದ ನಂತರ, ಖಾಸಗಿ ಶಾಲೆಗಳು (Private Schools) ಯಾವುದೇ ಕಾರಣ ನೀಡಿ ಬಡ ಮಕ್ಕಳ ಪ್ರವೇಶವನ್ನು ನಿರಾಕರಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಉತ್ತರ ಪ್ರದೇಶದ ಲಕ್ನೋದ ಖಾಸಗಿ ಶಾಲೆಯೊಂದು ಬಡ ಮಗುವಿಗೆ ಪ್ರವೇಶ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ … Read more

ಮಲೆನಾಡು ಮುದ್ರಕರ ಸಂಘಕ್ಕೆ ಹೊಸ ನಾಯಕತ್ವ: ಗಣೇಶ್ ಬೀಳಗಿ ಅವಿರೋಧ ಆಯ್ಕೆ – ಸಮಸ್ಯೆಗಳ ಪರಿಹಾರಕ್ಕೆ ಭರವಸೆ.!

ಮಲೆನಾಡು ಮುದ್ರಕರ ಸಂಘದ ನೂತನ ಅಧ್ಯಕ್ಷರಾಗಿ ಗಣೇಶ್ ಬೀಳಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಸದಸ್ಯರ ಏಕಮತದಿಂದ ನಡೆದ ಈ ಆಯ್ಕೆ, ಸಂಘಟನೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸುವ ಪ್ರಮುಖ ಹೆಜ್ಜೆಯಾಗಿದೆ. ಪ್ರಸ್ತುತ ಮುದ್ರಣ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ, ಪ್ರಿಂಟಿಂಗ್ ದರವನ್ನು ಹೆಚ್ಚಿಸಲು ಸಾಧ್ಯವಾಗದೆ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಡಿಮೆ ಬೆಲೆಯಲ್ಲಿ ಸೇವೆ ನೀಡುವ ಸ್ಪರ್ಧೆಯಿಂದ ಲಾಭಾಂಶ ಕುಂಠಿತವಾಗಿದ್ದು, ಕಾರ್ಮಿಕರ ಸಮಸ್ಯೆಗಳೂ ಹೆಚ್ಚಾಗಿವೆ. ಶಿವಮೊಗ್ಗದಲ್ಲಿ ಹಲವು ಯೂನಿಯನ್‌ಗಳು ಕಾರ್ಯನಿರ್ವಹಿಸುತ್ತಿದ್ದು  ಒಗ್ಗೂಡಿ ಕಾಯ೯ ನಿರ್ವಹಿಸಿ … Read more