Wednesday, September 25, 2024
spot_img

ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿ ನುಡಿ !!

 ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಹೆಸರು ಸೂಕ್ತ ?

ಬಸವ ಮರುಳಸಿದ್ಧ ಸ್ವಾಮಿಗಳವರು
ಶ್ರೀ ಬಸವತತ್ತ್ವ ಪೀಠ, ರವರ ನುಡಿ,

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದು ನಮಗೆ ಅಪಾರ ಸಂತೋಷ ಉಂಟುಮಾಡಿದೆ. 2019ರ ಜನವರಿಯಲ್ಲಿ ಶಿವರಾತ್ರೀಶ್ವರರ 1059ನೆಯ ಜಯಂತಿ ಮಹೋತ್ಸವವನ್ನು ಆಚರಿಸುವಾಗ ಈ ಜಾಗಕ್ಕೆ ಅಲ್ಲಮಪ್ರಭು ಬಯಲು ಎಂದೇ ನಾಮಕರಣ ಮಾಡಿದ್ದು, ಅದನ್ನು ಹಾಗೆಯೇ ಕರೆಯಬೇಕೆಂದು ಶರಣ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯ ಬಹಿರಂಗ ಸಮಾರಂಭದಲ್ಲಿ ಸುತ್ತೂರು ಜಗದ್ಗುರುಗಳವರು ಸೂಚಿಸಿದ್ದರು. ಅಂದು ಎಲ್ಲ ಜನಸಮುದಾಯದ ಒಪ್ಪಿಯಿಂದ ಘೋಷಿಸಿದ್ದ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಅಧಿಕೃತವಾಗಿ ಘೋಷಿಸಿರುವುದು, 12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರಿಂದ ಸ್ಥಾಪಿಸಲ್ಪಟ್ಟ ಜಗತ್ತಿನ ಪ್ರಜಾಪ್ರಭುತ್ವದ ತಂದೆಯೆಂದೇ ಖ್ಯಾತಿವೆತ್ತ ಅನುಭವ ಮಂಟಪಕ್ಕೆ ಸಂದ ಗೌರವವೆಂದು ಭಾವಿಸಿಕೊಂಡಿದ್ದೇವೆ.

 

ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಘೋಷಿಸಿದ ನಾಡಿನ ಮುಖ್ಯಮಂತ್ರಿಗಳಾದ ಶರಣ ಸಿದ್ಧರಾಮಯ್ಯನವರಿಗೆ ಹಾಗು ಈ ವಿಷಯದ ಕುರಿತಾಗಿ ದನಿ ಎತ್ತಿ ಮುಖ್ಯಮಂತ್ರಿಗಳ ಗಮನಸೆಳೆದ ಸಚಿವರಾದ ಶರಣ ಮಧು ಬಂಗಾರಪ್ಪ ಅವರಿಗೆ ಜಿಲ್ಲೆಯ ಎಲ್ಲಾ ಮಠಾಧೀಶರ ಪರವಾಗಿ ಹಾಗು ಸಮಾಜ ಬಾಂಧವರ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇವೆ.

-ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳವರು
ಶ್ರೀ ಬಸವತತ್ತ್ವ ಪೀಠ, ಚಿಕ್ಕಮಗಳೂರು
ಬಸವಕೇಂದ್ರ, ಶಿವಮೊಗ್ಗ.

Related Articles

Stay Connected

0FansLike
3,912FollowersFollow
0SubscribersSubscribe

Latest Articles