ಬೆಂಗಳೂರು: ಬಿಟ್ ಕಾಯಿನ್ ಕೇಸ್ಗೆ (Bitcoin case) ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ (DYSP Sridhar Pujar) ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕಟಣೆ (Police announcement) ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದುಕೊಟ್ಟವರಿಗೆ ಬಹುಮಾನ (Reward) ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. DySP ಶ್ರೀಧರ್ ಪೂಜಾರ್ ಬಗ್ಗೆ ಮಾಹಿತಿಯಿದ್ದರೆ ಸಿಐಡಿ ಫೈನಾನ್ಷಿಯಲ್ ಇಂಟೆಲಿಜೆನ್ಸ್ (CID Financial Intelligence**) ಡಿವೈಎಸ್ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.**
ಬಿಟ್ ಕಾಯಿನ್ ಹಗರಣ ಸಂಬಂಧ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಪ್ರಕಟಣೆ ನೀಡಿದ್ದು, ನಾಪತ್ತೆಯಾದ ಡಿವೈಎಸ್ಪಿ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದೆ. ಡಿವೈಎಸ್ಪಿ, ಫೈನಾಕ್ಷಿಯಲ್ ಇಂಟೆಲಿಜೆನ್ಸ್ ವಿಭಾಗ, ಸಿಐಡಿ, ಬೆಂಗಳೂರು. ದೂರವಾಣಿ ಸಂಖ್ಯೆ; 080 22094485, 22094498 (ಸಿಐಡಿ ಕಂಟ್ರೋಲ್ ರೂಂ), ಮೊಬೈಲ್ ಸಂಖ್ಯೆ 9480800181, ತನಿಖಾಧಿಕಾರಿಗಳು; 94481 49915 ನಂಬರ್ಗೆ ಸಂಪರ್ಕಿಸಬಹುದು.
ಎಸ್ಐಟಿ ಅಧಿಕಾರಿಗಳ ಮೇಲೆ ಕಾರು ಹತ್ತಿಸಿ ಎಸ್ಕೇಪ್
ಈ ಹಿಂದೆ ಆರೋಪಿ ಶ್ರೀಧರ್ ಪೂಜಾರ್ ನನ್ನು ಬಂಧಿಸಲು ಎಸ್ಐಟಿ ಪೊಲೀಸರು ತೆರಳಿದ ಸಂದರ್ಭದಲ್ಲಿ ಅವರ ಮೇಲೆಯೇ ಕಾರು ಹತ್ತಿಸಿ ಎಸ್ಕೇಪ್ ಆಗಿದ್ದ. ಘಟನೆಯಲ್ಲಿ ಎಎಸ್ಐ ಭಾಸ್ಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಸಲಿಗೆ ಆಗಿದ್ದೇನು?
ಆರೋಪಿ ಶ್ರೀಧರ್ ಅವರು ಆಂತರಿಕ ಭದ್ರತಾ ವಿಭಾಗದ ಡಿವೈಎಸ್ಪಿ ಆಗಿದ್ದು, ಅವರನ್ನು ಬಂಧಿಸಲು ಫೆಬ್ರವರಿ 27ರಂದು ಎಸ್ಐಟಿ ಟೀಂ ಮುಂದಾಗಿತ್ತು. ಬೆಂಗಳೂರಿನ ಸೆಂಟ್ರಲ್ ಕಾಲೇಜು ಬಳಿಯ ಮೆಟ್ರೋ ನಿಲ್ದಾಣದ ಬಳಿ ವಕೀಲರ ಜೊತೆಯಲ್ಲಿದ್ದ ಅವರನ್ನು ಬಂಧಿಸಲು ಮುಂದಾಗಿದ್ದರು. ಆದರೆ ಎಸ್ಐಟಿ ಟೀಂ ಅಧಿಕಾರಿಗಳನ್ನು ನೋಡುತ್ತಿದ್ದಂತೆ ಶ್ರೀಧರ್ ಅವರು ಎಸ್ಕೇಪ್ ಆಗಲು ಯತ್ನಿಸಿದ್ದರು. ಈ ವೇಳೆ ಬೆನ್ನಟ್ಟಿದ್ದ ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಎಸ್ಐಟಿ ಅಧಿಕಾಗಳ ಮೇಲೆಯೇ ಕಾರು ಹತ್ತಿಸಿ ಪರಾರಿಯಾಗಿದ್ದರು.